ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.