ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.