ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.