ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.