ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು.