ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.