ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.