ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.
Go to Home Page