ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.