ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.