ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಸನ್ನಿಧಿಗೆ ಬೇಗಬೇಗನೆ ಕರೆದುಕೊಂಡು ಬಂದನು. “ರಾಜರೇ, ಆ ಕನಸಿನ ಉದ್ದೇಶವನ್ನು ನಿಮಗೆ ತಿಳಿಸಬಲ್ಲ ಒಬ್ಬನು ನನಗೆ ಸಿಕ್ಕಿದ್ದಾನೆ. ಅವನು ಜುದೇಯದಿಂದ ಸೆರೆಯಾಳಾಗಿ ತಂದವರಲ್ಲಿ ಒಬ್ಬನಾಗಿದ್ದಾನೆ,” ಎಂದು ಅರಿಕೆಮಾಡಿದನು.