ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.