ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.