ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.