ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.