ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.