ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ