ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.