ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.