ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”