“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.