ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.