ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.