ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.