ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”