ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.