ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.