ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.