ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.