ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.