ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.
Go to Home Page