ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.
Go to Home Page