“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.