ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.