ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.
Go to Home Page