ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.