ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು.