ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.