ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.