ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.