ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.