ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.