ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.