ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.