ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.