ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.