ಆ ದಿವಸ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲೆ ಹತ್ತಿ ಹೋಗಿ ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ,” ಎಂದು ಹೇಳಿದನು. ಆದುದರಿಂದಲೇ “ಕುರುಡರೂ ಕುಂಟರೂ ದೇವಾಲಯದೊಳಗೆ ಹೋಗಲಾಗದು,” ಎಂಬ ಹೇಳಿಕೆಯುಂಟು.