ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.