ಇದಲ್ಲದೆ ಅವನು ಅವರ ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಮೂವತ್ತೈದು ಕಿಲೊಗ್ರಾಂ ತೂಕದ್ದು. ಅದರಲ್ಲಿದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.