ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.